16 – ವಿಗ್ರಹಗಳಿಗೆ ಆಹಾರವನ್ನು ಬಲಿಕೊಡಲಾಗುತ್ತದೆ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ವಿಗ್ರಹಗಳಿಗೆ ಆಹಾರವನ್ನು ಬಲಿಕೊಡಲಾಗುತ್ತದೆ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 67 ಭಾಗಗಳು

ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,

ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.

ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು. ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು, ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.

“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.

ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು. ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು. ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು. ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು. ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.

ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು. ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.

ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು. ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.

ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.

ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.

ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.

ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.

ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.

ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.

ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ. ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ. ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು. “‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

“ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು, “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ. ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು. ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ. ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.

ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ. ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.

ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’

“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು, ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.

ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.

ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.

ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು. ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು; “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ. ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”

ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.

“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು. ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.

ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ. ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ. ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.

ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ, “ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”

ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ. ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ. ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ. ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.

ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ. ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ. ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು? ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.

ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.

ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net